ಮಂಗಳವಾರ, ಜುಲೈ 23, 2013

ಆವಳಂಜಿಸಿದಳವಳು ಪೇಳು ರಂಗಮ್ಮಾ : Avalanjisidalavalu Pelu Rangamma

ಆವಳಂಜಿಸಿದಳವಳು ಪೇಳು ರಂಗಮ್ಮಾ

ಕೀರ್ತನಕಾರರು : ಪ್ರಸನ್ನ ವೆಂಕಟದಾಸರು
ರಾಗ : ಶ್ರೀ
ತಾಳ : ತ್ರಿಪುಟ

ಆವಳಂಜಿಸಿದಳವಳು ಪೇಳು ರಂಗಮ್ಮಾ ನಾ
ನವಳ ಗಾರುಮಾಡುವೆ ನಡೆ ಕೃಷ್ಣಮ್ಮಾ                ||ಪ||

ದೂರುವಿರ‍್ಯಾದರೆ ಮಗನ ಹಾದಿಗೆ ಹೋಗದಿರಿ ಎಂದು
ಸಾರಿಕೈಯ ಕಡ್ಡಿಕೊಟ್ಟೆ ಜಾರೆಯರಿಗೆ
ಸಾರಿಸಾರಿಗೆನ್ನ ಮನ ರಟ್ಟು ಮಾಡುವ ಮಾತೇನು
ಆರಿಗೆ ಮಕ್ಕಳಿಲ್ಲೆ ನಾನೇ ಹಡದವಳೇನೋ                ||೧||

ಇದ್ದರಿರಲೀ ಕೂಸಿನ ಆಡುವಾಟಕೊಪ್ಪಿದರೆ
ಎದ್ದು ಹೋಗೆಮ್ದರೆ ಹೋಗಲಿಲ್ಲ ಪಳ್ಳಿಂದಾ
ಕದ್ದು ತಿಂದನೆಂಬ ಸುಳ್ಳು ಸುದ್ದಿಗೆ ಕಾರಣವೇನೋ
ಮುದ್ದೆಬೆಣ್ಣೆ ಕೈಯಲಿತ್ತಾರೊಲ್ಲದೆ ಚಲ್ಲುವ ಕಂದಗ        ||೨||

ಏನು ಪುಣ್ಯರಾಶಿ ಕೂಡಿತೆಂದು ನಿನ್ನಾಟವ ನೋಡಿ
ಬೀಸಿ ಬಿಗಿದಪ್ಪುವಂಥ ಭಾಗ್ಯವನುಂಡೆ
ಕೂಸೆ ನಿನ್ನ ಕಂಡಸೂಯಾ ಬಡುವಾರ ಅಳಿಯಲಮ್ಮಾ
ದಾಸರಿಂಗೆ ಲೇಸಾಗಲಿ ಪ್ರಸನ್ನವೆಂಕಟ ಕೃಷ್ಣಾ                ||೩||


Labels: ಆವಳಂಜಿಸಿದಳವಳು ಪೇಳು ರಂಗಮ್ಮಾ, Avalanjisidalavalu Pelu Rangamma, ಪ್ರಸನ್ನ ವೆಂಕಟದಾಸರು, Prasanna Venkatadasaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ