ಸೋಮವಾರ, ಆಗಸ್ಟ್ 19, 2013

ಅರಿತು ನಡೆಯಲು ಬೇಕು : Aritu Nadeyaklu Beku

ಅರಿತು ನಡೆಯಲು ಬೇಕು 

ಕೀರ್ತನಕಾರರು : ಕನಕದಾಸರು  
ರಾಗ :  ಮುಖಾರಿ  
ತಾಳ : ಝಂಪೆ

ಅರಿತು ನಡೆಯಲು ಬೇಕು ನರಕಾಯವೆತ್ತಿದ ಮೇಲೆ 
ಅರಿಯದಿದ್ದರೆ ನರಕವೇ ಪ್ರಾಪ್ತಿ                                              ।।ಪ।।

ದುರ್ಜನರ ಮನೆಯ ಪಾಯಸಾನ್ನಕಿಂತ 
ಸಜ್ಜನರ ಮನೆಯ ರಬ್ಬಳಿಗೆ ಲೇಸು 
ಹೆಜ್ಜೆಗೆ ಸಾವಿರಾರು ಹೊನ್ನನಿತ್ತರೂ ಬೇಡ ಬಲು 
ದುರ್ಜನರ ಸಂಗ ಬಲು ಭಂಗ ಹರಿಯೆ                                     ।।೧।।

ಭಕ್ತಿಹೀನರ ಮನೆಯ ಪಟ್ಟ ಸುಪ್ಪತಿಗೆಗಿಂತ 
ಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸು 
ಮುಕ್ತಿ ಮಾರ್ಗವ ತೋರ್ಪ ಮುರಹರಣ ದಾಸರನು 
ಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ                            ।।೨।।

ಆಶೆಕಾರರ ಮನೆಯ ವಿಳಾಸ ಸುಖಕಿಂತ 
ಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸು 
ಭೂಸುರ ಪ್ರಿಯ ಕಾಗಿನೆಲೆಯಾದಿಕೇಶವನ 
ಮೀಸಲಿನ ಪಾದಭಜನೆ ಕಡುಲೇಸು ಮನವೆ                              ।।೩।।

Labels: ಅರಿತು ನಡೆಯಲು ಬೇಕು , Aritu Nadeyaklu Beku, ಕನಕದಾಸರು, Kanakadasaru

1 ಕಾಮೆಂಟ್‌: