ಸೋಮವಾರ, ಅಕ್ಟೋಬರ್ 7, 2013

ಚಿತ್ತಜನಯ್ಯನ ಚಿಂತಿಸು ಮನವೇ : Chittajanayyana Chintisu Manave

ಚಿತ್ತಜನಯ್ಯನ ಚಿಂತಿಸು ಮನವೇ

ಕೀರ್ತನಕಾರರು : ಶ್ರೀಪಾದರಾಜರು
ರಾಗ : ಕಾಂಬೋದಿ
ತಾಳ : ಆದಿ

ಚಿತ್ತಜನಯ್ಯನ ಚಿಂತಿಸು ಮನವೇ
ಹೊತ್ತು ಕಳೆಯದೆ ಸರ್ವೋತ್ತಮನ ನೆನೆ ಮನವೆ ||ಪ||

ಕಾಲನ ದೂತರು ನೂಲು ಹಗ್ಗವ ತಂದು
ಕಾಲು ಕೈಗಳ ಕಟ್ಟಿ ಮ್ಯಾಲೆ ಕುಟ್ಟಿ
ಕಾಲಪಾಶದೊಳಿಟ್ಟು ಶೂಲದಿಂದಿರುವಾಗ
ಪಾಲಿಸುವರುಂಟೆ ಜಾಲವ ಮಾಡದೆ ||೧||

ದಂಡಧರನ ಭಟರು ಚಂಡಕೋಪದಿ ಬಂದು
ಕೆಂಡದ ನದಿಯ ತಡೆಗೆ ಕೊಂಡೊಯ್ದು
ಖಂಡಖಂಡವ ಕಿತ್ತು ಕೆಂಡದೊಳಿಡುವಾಗ
ಹೆಂಡಿರು ಮಕ್ಕಳು ಬಂದು ಬಿಡಿಸಬಲ್ಲರೆ ಮರುಳೆ ||೨||

ಅಂಗಳಿಗೆ ಡಬ್ಬಣಂಗಳ ಸೇರಿಸಿ ಎರಡು
ಕಂಗಳಿಗೆ ಸೀಸವ ಕಾಸಿ ಪೊಯ್ಯಲು
ತಂಗಿ ಅಕ್ಕ ಬಂದು ಭಂಗವ ಬಿಡಿಸುವರೆ
ಅಂಗವು ಸ್ಥಿರವಲ್ಲ ರಂಗವಿಠಲ ಬಲ್ಲ ||೩||

Labels: ಚಿತ್ತಜನಯ್ಯನ ಚಿಂತಿಸು ಮನವೇ, Chittajanayyana Chintisu Manave, ಶ್ರೀಪಾದರಾಜರು, Sripadarajaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ