ಸೋಮವಾರ, ಅಕ್ಟೋಬರ್ 7, 2013

ದುರಿತಗಜ ಪಂಚಾನನ ನರಹರಿಯೆ : Duritagaja Panchanana Narahariye

ದುರಿತಗಜ ಪಂಚಾನನ ನರಹರಿಯೆ

ಕೀರ್ತನಕಾರರು : ಶ್ರೀಪಾದರಾಜರು
ರಾಗ : ಕಾಂಬೋದಿ
ತಾಳ : ಆದಿ

ದುರಿತಗಜ ಪಂಚಾನನ ನರ-
ಹರಿಯೆ ದೇವರ ದೇವ ಕಾಯೊ ಗೋವಿಂದ    ||ಪ||

ಹೆಸರುಳ್ಳ ನದಿಗಳನೊಳಗೊಂಬ ಸಮುದ್ರನು
ಬಿಸುಡುವನೆ ಕಾಲುಹೊಳೆಗಳನು ಗೊವಿಂದ   ||೧||

ಒಂದು ಮೊಲಕೆ ಆರು ಹುಲಿ ಬಂದು ಕವಿದಿವೆ
ಬಂಧನ ಬಿಡಿಸೆನ್ನ ತಂದೆ ಗೋವಿಂದ  ||೨||

ಹೆತ್ತ ಮಕ್ಕಳು ಮರುಳಾದರೆ ತಾಯ್ತಂದೆ
ಎತ್ತದೆ ನೆಲಕೆ ಬಿಸುಡುವರೆ ಗೋವಿಂದ  ||೩||

ಮುನ್ನ ಮಾಡಿದ ಕರ್ಮ ಬೆನ್ನಟ್ಟಿ ಬಂದರೆ
ನಿನ್ನನ್ನು ಓಲೈಸಲ್ಯಾಕೆ ಗೋವಿಂದ  ||೪||

ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆ
ಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ  ||೫||

ಅರಸು ಮುಟ್ಟಲು ದಾಸಿ ರಂಭೆಯಾದಳು ದೇವ
ಪರುಷ ಮುಟ್ಟಲು ಲೋಹ ಹೊನ್ನು ಗೋವಿಂದ ||೬||

ಮಾನಾಭಿಮಾನದೊಡೆಯ ರಂಗವಿಠಲ
ಜ್ಞಾನಿಗಳರಸನೆ ಕಾಯೋ ಗೋವಿಂದ   ||೭||

Labels: ದುರಿತಗಜ ಪಂಚಾನನ ನರಹರಿಯೆ, Duritagaja Panchanana Narahariye, ಶ್ರೀಪಾದರಾಜರು, Sripadarajaru

2 ಕಾಮೆಂಟ್‌ಗಳು: