ಮಂಗಳವಾರ, ಜುಲೈ 23, 2013

ಹಣ್ಣು ಬಂದಿದೆ ಕೊಳ್ಳಿರಿ : Hannu Bandide Kolliri

ಹಣ್ಣು ಬಂದಿದೆ ಕೊಳ್ಳಿರಿ

ಕೀರ್ತನಕಾರರು : ಪುರಂದರದಾಸರು
ರಾಗ : ಹಿಂದೋಳ
ತಾಳ : ರೂಪಕ

ಹಣ್ಣು ಬಂದಿದೆ ಕೊಳ್ಳಿರಿ ನೀವೀಗ
ಚೆನ್ನಬಾಲಕೃಷ್ಣನೆಂಬೊ ಚೆನ್ನಾದ ಬಾಳೆಯಹಣ್ಣು        ||ಪ||

ಹವ್ಯಕವ್ಯದ ಹಣ್ಣು ಸವಿವ ಸಕ್ಕರೆಹಣ್ಣು
ಭವರೋಗಗಳನೆಲ್ಲ ಕಳೆವ ಹಣ್ಣು
ನವನೀತ ಚೋರನೆಂಬ ಯಮನ ಅಂಜಿಪ ಹಣ್ಣು
ಅವನಿಯೊಳು ಶ್ರೀರಾಮನೆಂಬೊ ಹಣ್ಣು                 ||೧||

ಕೊಳೆತು ಹೋಗುವುದಲ್ಲ ಹುಳಿತು ಹೋಗುವುದಲ್ಲ
ಕಳೆದು ಬಿಸಾಡಿಸಿ ಕೊಳ್ಳುವುದಲ್ಲ
ಅಳೆದು ಕೊಂಬುವುದಲ್ಲ ಗಿಳಿ ಕಚ್ಚಿ ತಿಂಬೊದಲ್ಲ
ಒಳಿತಾದ ಹರಿಯೆಂಬೊ ಮಾವಿನಹಣ್ಣು                ||೨||

ಕೆಟ್ಟು ನಾರುವುದಲ್ಲ ಬಿತ್ತಿ ಬೆಳೆಯೋದಲ್ಲ
ಕಷ್ಟದಿ ಹಣಕೊಟ್ಟು ಕೊಂಬುವುದಲ್ಲ
ಸೃಷ್ಟಿಯೊಳಗೆ ನಮ್ಮ ಪುರಂದರವಿಠಲ
ಕೃಷ್ಣರಾಯನೆಂಬೊ ಶ್ರೇಷ್ಠವಾದ ಹಣ್ಣು                ||೩||


Labels: ಹಣ್ಣು ಬಂದಿದೆ ಕೊಳ್ಳಿರಿ, Hannu Bandide Kolliri, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ