ಶನಿವಾರ, ಆಗಸ್ಟ್ 31, 2013

ಏಳು ನಾರಾಯಣ ಏಳು ಲಕ್ಷ್ಮೀರಮಣ : Elu Narayana Elu Lakshmiramana

ಏಳು ನಾರಾಯಣ ಏಳು ಲಕ್ಷ್ಮೀರಮಣ

ಕೀರ್ತನಕಾರರು : ಕನಕದಾಸರು
ರಾಗ :  ಬೌಳಿ
ತಾಳ : ಖಂಡಛಾಪು


ಏಳು ನಾರಾಯಣ ಏಳು ಲಕ್ಷ್ಮೀರಮಣ                 ।।ಪ॥

ಏಳು ಶ್ರೀಗಿರಿ ಒಡೆಯ ಶ್ರೀವೆಂಕಟೇಶ
ಏಳಯ್ಯ ಬೆಳಗಾಯಿತು                                     ।।ಅ.ಪ॥

ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟು
ಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆ
ಶೇಷಶಯನನೆ ಏಳು ಸಮುದ್ರ ಮಥನವ ಮಾಡು
ದೇಶ ಕೆಂಪಾಯಿತು ಏಳಯ್ಯ ಹರಿಯೇ                 ।।೧।।

ಅರಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳ
ಸುರರು ತಂದಿದ್ದಾರೆ ಬಲು ಭಕುತಿಯಿಂದ
ಅರವಿಂದನಾಭ ಸಿರಿ ವಿಧಿಭವಾದಿಗಳೊಡೆಯ
ಹಿರಿದಾಗಿ ಕೋಳಿ ಕೂಗಿತೇಳಯ್ಯ ಹರಿಯೇ            ।।೨।।

ದಾಸರೆಲ್ಲರು ಬಂದು ಧೂಳಿ ದರ್ಶನ ಗೊಂಡು
ಲೇಸಾಗಿ ತಾಳ ದಂಡಿಗೆಯ ಪಿಡಿದು
ಶ್ರೀಶನೆಲೆಯಾದಿ ಕೇಶವ ನಿಮ್ಮ ಪಾದವನು
ಲೇಸಾಗಿ ಸ್ಮರಿಸಿ ಪೊಗಳುವರು ಹರಿಯೇ              ।।೩।।


Labels: ಏಳು ನಾರಾಯಣ ಏಳು ಲಕ್ಷ್ಮೀರಮಣ, Elu Narayana Elu Lakshmiramana, ಕನಕದಾಸರು, Kanakadasaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ