ಮಂಗಳವಾರ, ಸೆಪ್ಟೆಂಬರ್ 10, 2013

ಬಾಗಿಲನು ತೆರೆದು ಸೇವೆಯನು ಕೊಡೊ : Bagilanu Teredu Seveyanu Kodo

ಬಾಗಿಲನು ತೆರೆದು ಸೇವೆಯನು ಕೊಡೊ

ಕೀರ್ತನಕಾರರು : ಕನಕದಾಸರು
ರಾಗ : ಅಠಾಣ
ತಾಳ : ಅಟ್ಟ

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ                 ||ಪ||

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರುಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲಾ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ        ||೧||

ಕಡುಕೋಪದಿಂ ಖಳನು ಖಡುಗವನು ಹಿಡಿದು ನಿ
ನ್ನೊಡೆಯನೆಲ್ಲಿಹನು ಎಂದು ನುಡಿಯೆ
ದೃಢಭಕಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಕಂಭದಿಂದೊಡೆದೆ ನರಹರಿಯೆ                    ||೨||

ಯಮಸುತನ ರಾಣಿಗೆ ಅಕ್ಷಯವಸನವಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ                        ||೩||

Labels: ಬಾಗಿಲನು ತೆರೆದು ಸೇವೆಯನು ಕೊಡೊ, Bagilanu Teredu Seveyanu Kodo, ಕನಕದಾಸರು, Kanakadasaru 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ