ಬುಧವಾರ, ಸೆಪ್ಟೆಂಬರ್ 11, 2013

ಶರಣು ಸಕಲೋದ್ಧಾರ : Sharanu Sakaloddhara

ಶರಣು ಸಕಲೋದ್ಧಾರ

ಕೀರ್ತನಕಾರರು : ಪುರಂದರದಾಸರು

ಶರಣು ಸಕಲೋದ್ಧಾರ ಅಸುರ ಕುಲ ಸಂಹಾರ
ಶರಣು ದಶರಥ ಬಾಲ ಜಾನಕೀಲೋಲ                     ||ಪ||

ಈ ಮುದ್ದು ಈ ಮುಖವು ಈ ತನುವಿನಾ ಕಾಂತಿ
ಈ ಬಿಲ್ಲು ಈ ಬಾಣ ಈ ನಿಂತ ಈ ಭಾವ
ಈ ತಮ್ಮ ಈ ಸೀತೆ ಈ ಬಂಟ ಈ ಭಾಗ್ಯ
ಯಾವ ದೇವರಿಗೆ ಉಂಟು ಮೂರುಲೋಕದೊಳಗೆ       ||೧||

ಉಟ್ಟ ಪೀತಾಂಬಾರವು ಉಡಿಗೆಜ್ಜೆ ಮಾಣಿಕವೂ
ದೊಡ್ಡ ನವರತ್ನದ ಆಭರಣ ಇರಲು
ಕೊಟ್ಟ ಭಾಷೆಗೆ ತಪ್ಪ ನಿಜಭಕ್ತರಿಗೆ ಒಲಿವ
ಸೃಷ್ಟಿಯೊಳಗೆ ಕಾಣೆ ಕೌಸಲ್ಯರಾಮ                         ||೨||

ಪಾಲಿಸಲು ಅಯೋಧ್ಯ ಪಟ್ಟಣದಲ್ಲಿ ಪುರವಾಸ
ಬೇಡಿದ ಇಷ್ಟಾರ್ಥಗಳ ಕೊಡುವೆನೆನುತ
ಭಾವ ಶುದ್ಧಿಯುಳ್ಳ ತನ್ನ ಭಕುತರ ಪೊರೆವ
ಪುರಂದರ ವಿಟ್ಟಲನೆ ಅಯೋಧ್ಯ ರಾಮ                    ||೩||

Labels: ಶರಣು ಸಕಲೋದ್ಧಾರ, Sharanu Sakaloddhara, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ