ಬುಧವಾರ, ಸೆಪ್ಟೆಂಬರ್ 11, 2013

ವಾದಿರಾಜ ಮುನಿಪಾ ಹಯಮುಖ : Vadiraja Munipa Hayamukha

ವಾದಿರಾಜ ಮುನಿಪಾ ಹಯಮುಖ

ಕೀರ್ತನಕಾರರು : ಗೋಪಾಲದಾಸರು
ರಾಗ : ಖರಹರಪ್ರಿಯ
ತಾಳ : ಆದಿ

ವಾದಿರಾಜ ಮುನಿಪಾ ಹಯಮುಖ
ಪಾದಕಮಲ ಮಧುಪಾ                                   ||ಪ||

ನೀ  ದಯದಲಿ ತವ ಪಾದ ಧ್ಯಾನವನು
ಆದರದಲಿ ಕೊಟ್ಟಾದರಿಸೆನ್ನನು                         ||ಅ.ಪ||

ಮೂಷಕ ಬಿಲದಿಂದ ಉದರಪೋಷಕ ಬರಲಂದು
ವಾಸುಕಿ ಭಯದಿ ನಿಮ್ಮಾಸನದೆಡೆ ಬರೆ
ಕ್ಲೇಶ ಕಳೆದು ಸಂತೋಷಗೈಸಿದೆ                       ||೧||

ಮುಂದೆ ಭೂತನರನಾ ಪ್ರೇರಿಸಿ
ಹಿಂದೆ ಒಬ್ಬ ನರನಾ
ನಿಂದಿರಿಸಿದೆ ಆನಂದದಿಂದ ಜನ
ವೃಂದ ನೋಡುತಿರೆ ಅಂದಣ ನಡಿಸಿದ್ಯೋ          ||೨||

ಕ್ಷಿತಿಯೊಳು ಸತಿ ತನ್ನಾ ವಲ್ಲಭ
ಮೃತಿಯೈದಿರೆ ಮುನ್ನಾ
ಅತಿಶೋಕದಿ ಬಂದು ನುತಿಸಲು ಆ
ಪತಿಯನು ಬದುಕಿಸಿ ಹಿತದಿ ರಕ್ಷಿಸಿದೆ                 ||೩||

ನರಪತಿ ವ್ಯಾಧಿಯಲಿ ಬಳಲ್ವದ
ತ್ವರಿತದಿ ನೀ ಕೇಳಿ
ಹರುಷದಿ ವ್ಯಾಧಿಯ ಪರಿಹರಿಸ್ಯವನಿಗೆ
ಹರುಷದಿಂದಲಭಯದ ತೋರಿದೆ                     ||೪||

ಶಾಸ್ತ್ರ ಪ್ರಸಂಗದಲಿ ನಾರಾಯಣ ಭೂತರ ಗೆಲಿದಲ್ಲೆ
ಖ್ಯಾತಿಯಿಂದ ಬಹು ಮಾತನಾಡಿ ಶ್ರೀ
ನಾಥನ ಮಂದಿರ ಪ್ರೀತಿಲಿ ತರಿಸಿದ್ಯೋ                ||೫||

ತುರಗವದನ ಪಾದಾ ಭುಜಗಳಲಿ
ಧರಿಸಿಕೊಂಡು ಮೋದ ಕಡಲೆ ಮಡ್ಡಿಯನು
ಕರದಿಂದುಣಿಸಿದ ಗುರುವರ ಶೇಖರ                    ||೬||

ಆ ಮಹಾ ಗೋಪಾಲವಿಠ್ಠಲ ತಾಮರಸದಳಗಳ
ಧೀಮಂತರಿಗೆ ಸುಕಾಮಿತವನುಕೊಡುವ
ಆ ಮಹಾಮಹಿಮ                                            ||೭||

Labels: ವಾದಿರಾಜ ಮುನಿಪಾ ಹಯಮುಖ, Vadiraja Munipa Hayamukha, ಗೋಪಾಲದಾಸರು, Gopaladasaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ