ರಂಗ ನಮ್ಮನೆಗೆ ಬಂದ
ಕೀರ್ತನಕಾರರು : ಗಲಗಲಿ ಅವ್ವನವರು
ರಂಗ ನಮ್ಮನೆಗೆ ಬಂದ ಮತ್ತೇನು ತಂದ ।।ಪ॥
ಜಗದೋದ್ಧಾರನ ಸಭೆಗೆ ಬಂದ ನಗುವ ಪರಿಯ ಹೇಳಿದ್ದು ತಂದ
ಬಗೆ ಬಗೆ ವಸ್ತ್ರಕೊಳ್ಳಿರೆಂದ ಪಗಡಿ ಧರ್ಮಗೆ ತರಲಿಲ್ಲೆಂದ ।।೧।।
ವಾಣಿ ಮಾವ ಮನೆಗೆ ಬಂದ ಜಾಣತನವ ಹೇಳಿದ್ದು ತಂದ
ಮಾಣಿಕ ಮುತ್ತುಕೊಳ್ಳಿರೆಂದ ಕ್ವಾಣವ ಧರ್ಮಗೆ ತರಲಿಲ್ಲಂದ ।।೨।।
ಕೃಷ್ಣರಾಯ ಸಭೆಗೆ ಬಂದ ಎಷ್ಟು ಜಂಬ ಹೇಳಿದ್ದು ತಂದ
ಪಟ್ಟಾವಳಿ ಕೊಳ್ಳಿರೆಂದ ಹುಟ್ಟು ಭೀಮಗೆ ತರಲಿಲ್ಲೆಂದ ।।೩।।
ನಳಿನಾಕ್ಷಸಭೆಯೊಳು ಬಂದ ಹೊಳೆವೊ ಎಷ್ಟು ಹೇಳಿದ್ದು ತಂದ
ಝಳಿಸೋ ವಸ್ತ್ರಕೊಳ್ಳಿರೆಂದ ಬಳೆ ಪಾರ್ಥಗೆ ತರಲಿಲ್ಲೆಂದ ।।೪।।
ರಾಜ್ಯ ಲಕ್ಷ್ಮಣನಿಗಿಲ್ಲೆಂದ ಮಾಜುದಾ ಕುಲ ಧರ್ಮ ಕುಂದ
ತೇಜ ಮುಂದೆ ಓಡಿದ್ದು ಚೆಂದ ಸೋಜಿಗವಲ್ಲ ನಕುಲನೆಂದ ।।೫।।
ಸುಮನಸರು ನಗುವೊರೆಂದ ಭ್ರಮೆಯ ಕಳೆದ್ಯೋ ಸಹದೇವ ಎಂದ
ಅಮಿತದನವ ಕಾಯ್ವೋಛಂದ ರಮಿಯರಸು ನಗುವನೆಂದ ।।೬।।
ಅಂದ ಮಾತಿಗೆ ಬಲರಾಮ ಹೀಗೆಂದ ಚಂದವಾಯಿತು ಕುಶಲವೆಂದ
ನಿಂದ್ಯವ ನೀ ಮಾಡಿಕೊ ಎಂದ ಇಂದಿರೇಶಗೆ ತಿಳಿಸಿರೆಂದ ।।೭।।
Labels: ರಂಗ ನಮ್ಮನೆಗೆ ಬಂದ, Ranga Nammanege Banda, ಗಲಗಲಿ ಅವ್ವನವರು, Galagali Avvanavaru
ಕೀರ್ತನಕಾರರು : ಗಲಗಲಿ ಅವ್ವನವರು
ರಂಗ ನಮ್ಮನೆಗೆ ಬಂದ ಮತ್ತೇನು ತಂದ ।।ಪ॥
ಜಗದೋದ್ಧಾರನ ಸಭೆಗೆ ಬಂದ ನಗುವ ಪರಿಯ ಹೇಳಿದ್ದು ತಂದ
ಬಗೆ ಬಗೆ ವಸ್ತ್ರಕೊಳ್ಳಿರೆಂದ ಪಗಡಿ ಧರ್ಮಗೆ ತರಲಿಲ್ಲೆಂದ ।।೧।।
ವಾಣಿ ಮಾವ ಮನೆಗೆ ಬಂದ ಜಾಣತನವ ಹೇಳಿದ್ದು ತಂದ
ಮಾಣಿಕ ಮುತ್ತುಕೊಳ್ಳಿರೆಂದ ಕ್ವಾಣವ ಧರ್ಮಗೆ ತರಲಿಲ್ಲಂದ ।।೨।।
ಕೃಷ್ಣರಾಯ ಸಭೆಗೆ ಬಂದ ಎಷ್ಟು ಜಂಬ ಹೇಳಿದ್ದು ತಂದ
ಪಟ್ಟಾವಳಿ ಕೊಳ್ಳಿರೆಂದ ಹುಟ್ಟು ಭೀಮಗೆ ತರಲಿಲ್ಲೆಂದ ।।೩।।
ನಳಿನಾಕ್ಷಸಭೆಯೊಳು ಬಂದ ಹೊಳೆವೊ ಎಷ್ಟು ಹೇಳಿದ್ದು ತಂದ
ಝಳಿಸೋ ವಸ್ತ್ರಕೊಳ್ಳಿರೆಂದ ಬಳೆ ಪಾರ್ಥಗೆ ತರಲಿಲ್ಲೆಂದ ।।೪।।
ರಾಜ್ಯ ಲಕ್ಷ್ಮಣನಿಗಿಲ್ಲೆಂದ ಮಾಜುದಾ ಕುಲ ಧರ್ಮ ಕುಂದ
ತೇಜ ಮುಂದೆ ಓಡಿದ್ದು ಚೆಂದ ಸೋಜಿಗವಲ್ಲ ನಕುಲನೆಂದ ।।೫।।
ಸುಮನಸರು ನಗುವೊರೆಂದ ಭ್ರಮೆಯ ಕಳೆದ್ಯೋ ಸಹದೇವ ಎಂದ
ಅಮಿತದನವ ಕಾಯ್ವೋಛಂದ ರಮಿಯರಸು ನಗುವನೆಂದ ।।೬।।
ಅಂದ ಮಾತಿಗೆ ಬಲರಾಮ ಹೀಗೆಂದ ಚಂದವಾಯಿತು ಕುಶಲವೆಂದ
ನಿಂದ್ಯವ ನೀ ಮಾಡಿಕೊ ಎಂದ ಇಂದಿರೇಶಗೆ ತಿಳಿಸಿರೆಂದ ।।೭।।
Labels: ರಂಗ ನಮ್ಮನೆಗೆ ಬಂದ, Ranga Nammanege Banda, ಗಲಗಲಿ ಅವ್ವನವರು, Galagali Avvanavaru